ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

Update: 2022-08-27 05:50 GMT
(ರಾಮೇಗೌಡ)

ಮೈಸೂರು, ಆ.26: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ ಕಿರಿಯ ಸಹೋದರ ರಾಮೇಗೌಡ (64) ನಿಧನರಾದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಶುಕ್ರವಾರ ರಾತ್ರಿ ಅವರ ಸ್ವಗ್ರಾಮ ಮೈಸೂರು ತಾಲೂಕು ಸಿದ್ದರಾಮನ ಹುಂಡಿಯ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೊನೆಯ ಸಹೋದರ ಎಂದು ತಿಳಿದು ಬಂದಿದೆ.

ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಪತ್ನಿ ರುಕ್ಮಿಣಮ್ಮ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News