ನಳಿನ್ ಕುಮಾರ್ ರಾಜ್ಯಾಧ್ಯಕ್ಷ ಸ್ಥಾನ ಮುಂದುವರಿಕೆಯ ಬಗ್ಗೆ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

Update: 2022-08-28 13:19 GMT
ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಳಿನ್​ ಕುಮಾರ್​ ಕಟೀಲ್(Nalin Kumar Kateel)​ ರಾಜ್ಯಾಧ್ಯಕ್ಷ ಸ್ಥಾನ ಮುಂದುವರಿಕೆಯ ಬಗ್ಗೆ ಪಕ್ಷದ(BJP) ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ(KS Eshwarappa) ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರು ಯಾರು ಇರಬೇಕು, ಯಾರು ಇರಬಾರದು ಎನ್ನುವ ತೀರ್ಮಾನವನ್ನು ನಮ್ಮ ಹೈಕಮಾಂಡ್​ ಮಾಡುತ್ತಿದ್ದಾರೆ. ಅವರು ಏನು ತೀರ್ಮಾನ ಮಾಡುತ್ತಾರೆ ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.

ಇನ್ನು ಯಡಿಯೂರಪ್ಪ ಅವರಿಗೆ ಈಗಾಗಲೇ ಕೇಂದ್ರ ನಾಯಕರು ಪಕ್ಷದಲ್ಲಿ ವಿಶೇಷ ಸ್ಥಾನಮಾನ ನೀಡಿದ್ದಾರೆ. ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಸಂತೋಷ ಆಗಿದೆ. ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದರು.

ಇದನ್ನೂ ಓದಿ: 'ಪೂಜೆ ಮಾಡದಿದ್ದರೆ ಸಾವು ಸಂಭವಿಸಲಿದೆʼ ಎಂದು ಚಿನ್ನಾಭರಣ ದೋಚಿದ ಬುಡುಬುಡಿಕೆ ವೇಷಧಾರಿ!

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News