ಮರದಿಂದ ಬಿದ್ದು ನಿವೃತ್ತ ಶಿಕ್ಷಕ ಮೃತ್ಯು

Update: 2022-08-28 16:52 GMT

ಹೆಬ್ರಿ : ಮರದಿಂದ ಅಕಸ್ಮಿಕವಾಗಿ ಬಿದ್ದು ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಆ.28ರಂದು ಬೆಳಗ್ಗೆ 10.30ರ ಸುಮಾರಿಗೆ ನಾಡ್ಪಾಲು ಗ್ರಾಮದ ವಾಂಟ್ಯಾಳ ಸೀತಾನದಿ ಎಂಬಲ್ಲಿ ನಡೆದಿದೆ.

ಮೃತರನ್ನು ಸೀತಾನದಿಯ ರಾಜಗೋಪಾಲ ಶೆಟ್ಟಿ(68) ಎಂದು ಗುರುತಿಸ ಲಾಗಿದೆ. ಇವರು ಮನೆಯ ಬಳಿ ತೋಟದಲ್ಲಿರುವ ಬೋಗಿ ಮರಕ್ಕೆ ಕಬ್ಬಿಣದ ಏಣಿ ಯನ್ನು ಹಾಕಿ ಸುಮಾರು 20 ಅಡಿ ಮರವನ್ನು ಹತ್ತಿ ಕತ್ತಿಯಿಂದ ಸೊಪ್ಪನ್ನು ಕಡಿಯುತ್ತಿದ್ದರು. ಈ ವೇಳೆ ಇವರು ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದರೆ ನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಇವರು ಸೀತಾನದಿ ಪ್ರಾಥಮಿಕ ಶಾಲೆ ಯಲ್ಲಿ 25 ವರ್ಷಗಳ ಕಾಲ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಎಂಟು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದ ಇವರು ಕೃಷಿ ಕೆಲಸವನ್ನು ಮಾಡಿಕೊಂಡಿದ್ದರು. ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News