ಬೆಳ್ಳಾರೆ; ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ

Update: 2022-08-29 11:44 GMT

ಬೆಳ್ಳಾರೆ : ಮುಂದಿನ ದಿನಗಳಲ್ಲಿ ಹಬ್ಬಗಳು ಸಮೀಪಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಡಿವೈಎಸ್ಪಿ ಡಾ. ವೀರಯ್ಯ ಹೀರೆಮಠ್ ಇವರ  ನೇತೃತ್ವದಲ್ಲಿ ಪೊಲೀಸ್ ಪಥಸಂಚಲನವು ಬೆಳ್ಳಾರೆಯಲ್ಲಿ ನಡೆಯಿತು.

ಈ ಸಂದರ್ಭ ವಿದ್ಯಾರ್ಥಿಗಳು ಪೊಲೀಸರೊಂದಿಗೆ ಸಾಥ್ ನೀಡಿದರು. ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ , ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಸುಹಾಸ್, ಬೆಳ್ಳಾರೆ ಠಾಣಾ ಕ್ರೈಂ ಎಸೈ ಆನಂದ, ಬೆಳ್ಳಾರೆ ಠಾಣೆಯ ಪೊಲೀಸ್ ಸಿಬ್ಬಂದಿ, ಇತ್ತೀಚೆಗೆ ಅಹಿತಕರ ಘಟನೆ ಹಿನ್ನೆಲೆ ಬೆಳ್ಳಾರೆಯಲ್ಲಿ ಬಂದೋಬಸ್ತ್ ಗಾಗಿ ಬಂದ ಪೊಲೀಸ್ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News