ಬೆಳ್ಳಾರೆ; ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ
Update: 2022-08-29 11:44 GMT
ಬೆಳ್ಳಾರೆ : ಮುಂದಿನ ದಿನಗಳಲ್ಲಿ ಹಬ್ಬಗಳು ಸಮೀಪಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಡಿವೈಎಸ್ಪಿ ಡಾ. ವೀರಯ್ಯ ಹೀರೆಮಠ್ ಇವರ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನವು ಬೆಳ್ಳಾರೆಯಲ್ಲಿ ನಡೆಯಿತು.
ಈ ಸಂದರ್ಭ ವಿದ್ಯಾರ್ಥಿಗಳು ಪೊಲೀಸರೊಂದಿಗೆ ಸಾಥ್ ನೀಡಿದರು. ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ , ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಸುಹಾಸ್, ಬೆಳ್ಳಾರೆ ಠಾಣಾ ಕ್ರೈಂ ಎಸೈ ಆನಂದ, ಬೆಳ್ಳಾರೆ ಠಾಣೆಯ ಪೊಲೀಸ್ ಸಿಬ್ಬಂದಿ, ಇತ್ತೀಚೆಗೆ ಅಹಿತಕರ ಘಟನೆ ಹಿನ್ನೆಲೆ ಬೆಳ್ಳಾರೆಯಲ್ಲಿ ಬಂದೋಬಸ್ತ್ ಗಾಗಿ ಬಂದ ಪೊಲೀಸ್ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.