ರಾಮನಗರ, ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ, ಪರಿಶೀಲನೆ

Update: 2022-08-29 11:47 GMT

ರಾಮನಗರ, ಆ. 29:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಇಂದು (ಸೋಮವಾರ) ರಾಮನಗರ ಹಾಗೂ ಚನ್ನಪಟ್ಟಣದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದರು.

ಭಕ್ಷಿ ಹಾಗೂ ಕ್ಷೇತ್ರಹಳ್ಳಿ ಕೆರೆಗಳು ಒಡೆದು  ಹುಣಸನಹಳ್ಳಿ ರಸ್ತೆಯಲ್ಲಿನ ತೀವ್ರವಾಗಿ ಹಾನಿಗೊಳಗಾಗಿರುವ ನೂರಾರು ಮನೆಗಳ  ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.  ತಕ್ಷಣ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ನೀರು ನುಗ್ಗಿ ರೇಷ್ಮೆ ನೂಲು ತೆಗೆಯುವ ಘಟಕಗಳಿಗೆ ಹಾನಿಯಾಗಿದ್ದು, ಅಲ್ಲಿಗೂ ಭೇಟಿ ನೀಡಿದ ಮುಖ್ಯಮಂತ್ರಿಗಳು ಹಾನಿಯಾಗಿರುವ ಯಂತ್ರಗಳನ್ನು ಪರಿಶೀಲಿದರು.

ಇದನ್ನೂ ಓದಿ: ರಾಮನಗರದಲ್ಲಿ ಭಾರೀ ಮಳೆ: ಗ್ರಾಮಗಳು ಜಲಾವೃತ, ತಗ್ಗುಪ್ರದೇಶಗಳಿಗೆ ನುಗ್ಗಿದ ನೀರು

ಈ ಸಂದರ್ಭದಲ್ಲಿ ಸಚಿವ ಆರ್. ಅಶೋಕ್, ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್,  ಶಾಸಕಿ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News