ಮಳೆ ಹಿನ್ನೆಲೆ; ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಮಂಗಳವಾರ) ರಜೆ ಘೋಷಣೆ

Update: 2022-08-29 17:45 GMT

ಬೆಂಗಳೂರು, ಆ.29:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಆ.30ರಿಂದ ಸೆ.1ರವರೆಗೆ ಭಾರೀ ಮಳೆಯಾಗುವ (RAIN) ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದ ಮೆಜೆಸ್ಟಿಕ್, ಕಾರ್ಪೊರೇಶನ್, ಬಸವನಗುಡಿ, ಶೇಷಾಪುರಂ, ಜಯನಗರ, ಎಂಜಿ ರೋಡ್, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News