ಮುರುಘಾ ಶರಣರನ್ನು ಬಂಧಿಸಿ: ಎಚ್.ವಿಶ್ವನಾಥ್‍ ಆಗ್ರಹ

Update: 2022-08-30 17:06 GMT

ಮೈಸೂರು,ಆ.30: 'ಮುರುಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆ ದಾಖಲಾಗಿದ್ದು, ಶ್ರೀಗಳು ತಾತ್ಕಾಲಿಕವಾಗಿ ಪೀಠ ತ್ಯಜಿಸಿ ಕಾನೂನನ್ನು ಗೌರವಿಸಬೇಕು' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರು  ಪರಂಪರೆಯು ಇತಿಹಾಸ ಪ್ರಸಿದ್ಧ ಮಠ. ಮಕ್ಕಳ ಮೇಲಿನ ಲೈಂಗಿಕ ಆರೋಪ ಕೇಳಿ ಬಂದಿರುವುದು ವಿಷಾದದ ಸಂಗತಿ. ಮುಖ್ಯಮಂತ್ರಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಜನಪ್ರತಿನಿಧಿಗಳು ಪ್ರಕರಣದ ಕುರಿತು ಮೂಗು ತೂರಿಸುತ್ತಿರುವುದು, ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಾಕೆ ಮಾತನಾಡುತ್ತಿಲ್ಲ. ಈ ನಾಡಿನ ಮಕ್ಕಳ ಪ್ರಶ್ನೆ ಇದು. ಪ್ರಧಾನಿಗೆ ನಾನು ಈ ಬಗ್ಗೆ ವಿಸ್ತೃತವಾಗಿ ಪತ್ರ ಬರೆಯುತ್ತಿದ್ದೇನೆ’ ಎಂದರು.

ಪೀಠ ತ್ಯಜಿಸಲಿ: ‘ಕಾನೂನಿನ ಪ್ರಕಾರ ಸ್ವಾಮೀಜಿ ಬಂಧಿಸದೇ ಕೈ ಚೆಲ್ಲಿ ಕುಳಿತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಅಮಾನತು ಮಾಡಬೇಕು. ಅಮಾಯಕ ಬಾಲಕಿರಿಗೆ ನ್ಯಾಯ ಸಿಗಬೇಕು. ಮುರುಘಾ ಶ್ರೀಗಳು ಪೀಠ ತ್ಯಜಿಸಬೇಕು. ಆರೋಪ ಸುಳ್ಳಾದ ಮೇಲೆ ಮತ್ತೆ ಪೀಠ ಅಲಂಕರಿಸಲಿ’ ಎಂದು ಒತ್ತಾಯಿಸಿದರು.

ಮುರುಘಾ ಶ್ರೀಗಳ ವಿರುದ್ಧ ಪೊಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣದಾಖಲಾಗಿದೆ. ದೇಶದಲ್ಲಿ ನಿರ್ಭಯ ಪ್ರಕರಣದ ಬಗ್ಗೆ ಜನರು, ಸಂಘ ಸಂಸ್ಥೆಯವರು ಆಗ್ರಹ ಪಡಿಸಿದ ಬಳಿಕ 2012ರಲ್ಲಿ ಈ ಕಾಯ್ದೆ ಜಾರಿಗೆ ಬಂದಿದೆ. ಪೊಕ್ಸೋ ಕಾಯ್ದೆ ಬಲವಾಗಿ ನಮ್ಮ ಕೈಗೆ ಬಂದಿದೆ. ಇಂತಹ ಕಾಯ್ದಯಡಿ  ಗುರುಗಳು  ನಿಂತಿದ್ದಾರೆ. ಈ ಕಾಯ್ದೆಯ ಜೊತೆಗೆ ಮಕ್ಕಳ ಅಪರಾಧೀಕರಣ ಹಾಗೂ ಎಸ್ಸಿಎಸ್ಟಿ ಪ್ರಕರಣ ದಾಖಲಾಗಬೇಕು. ನಮ್ಮ ನೆಲದ ಕಾನೂನಿನ ಪ್ರಕಾರ ದಾಖಲಾಗಬೇಕು.ಸ್ವಾಮಿಗಳು ಹಾಗೂ ಹೆಣ್ಣು ಮಕ್ಕಳ ಈ ಕೇಸ್ ನಲ್ಲಿ ಯಾರು ತಲೆ ಹಾಕಬಾರದು. ಎಂದು ಎಚ್.ವಿಶ್ವನಾಥ್ ಹೇಳಿದರು.

ಸ್ವಾಮೀಜಿಗೆ ಒಂದು ನ್ಯಾಯ, ಸಾಮಾನ್ಯ ಜನರಿಗೆ ಒಂದು ನ್ಯಾಯಾನಾ? ವೋಟ್ ಗಾಗಿ ಸಿದ್ದರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸುಮ್ಮನಾದ್ರಾ..? ಈ ಪ್ರಕರಣದಲ್ಲಿ  ನ್ಯಾಯ ಸಿಗಲೇಬೇಕು. ಹಾಗಾದ್ರೆ ಸರ್ಕಾರ ಪೊಕ್ಸೋ ಕಾಯ್ದೆಯನ್ನ ನಾವು ಒಪ್ಪಲ್ಲಎಂದು ಹೇಳಿಬಿಡಲಿ. ಈ ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆಯುತ್ತೇನೆ. ಇಡೀ ರಾಜ್ಯದ ಮಾನ ಮರ್ಯಾದೆ  ಹೋಗುತ್ತಿದೆ. ವೋಟ್ ಗಾಗಿ ಸುಮ್ಮನಾಗಿ ಬಿಟ್ಟಿದ್ದೀರಲ್ಲ ಯಾಕೆ. ಚಿಂತಕರು, ಪ್ರಗತಿಪರರು ಏನು ಮಾಡುತ್ತಿದ್ದೀರಿ. ಮಕ್ಕಳ ಆಯೋಗ ಏನು ಮಾಡುತ್ತಿದೆ. ಈ ಘಟನೆಯಲ್ಲಿ ನ್ಯಾಯ ಸಿಗಲಿಲ್ಲವಾದರೆ 2023ರ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ವಿಧಾನಪರಿಷತ್ ಸದಸ್ಯಎಚ್.ವಿಶ್ವನಾಥ್‍ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News