ಶೀಘ್ರದಲ್ಲೇ ಪಂಚರತ್ನ ರಥಯಾತ್ರೆ: ಎಚ್.ಡಿ. ಕುಮಾರಸ್ವಾಮಿ

Update: 2022-08-31 16:24 GMT

ಬೆಂಗಳೂರು: ಶೀಘ್ರದಲ್ಲೇ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಚಾಲನೆ ಕಾರ್ಯಕ್ರಮದ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನಿಂತ ಮೇಲೆ ಪಂಚರತ್ನ ರಥಯಾತ್ರೆ ಪ್ರಾರಂಭಿಸಲಾಗುವುದು. ಮುಂದಿನ ತಿಂಗಳು ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರದಲ್ಲಿ ಮಾಡುತ್ತೇವೆ.‌ ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಪ್ರಾರಂಭಿಸುವುದಾಗಿ ಹೇಳಿದರು.

ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದ ಅವರು,  ಮುಖ್ಯಮಂತ್ರಿಗಳು ರಾಮನಗರಕ್ಕೆ ಭೇಟಿ ನೀಡಿದ್ದರು. ಅವರಿಗೆ ನಿಜವಾದ ಸಮಸ್ಯೆ ಅರಿವಾಗಿದೆ. ಎಲ್ಲವನ್ನು ಅರಿತಿದ್ದಾರೆ. ಎನ್ ಡಿ ಆರ್ ಎಫ್ ನಿಯಮದಂತೆ ಪರಿಹಾರ ಕೊಟ್ಟರೆ ಅಲ್ಲಿ ಸಮಸ್ಯೆ ಪರಿಹಾರ ಆಗುವುದಿಲ್ಲ. ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News