ಮುರುಘಾಮಠದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪರ ನಿಂತ ಹಿರಿಯ ವಕೀಲ ಸಿಪಿಎಂನಿಂದ ಉಚ್ಛಾಟನೆ

Update: 2022-09-01 19:08 GMT

ಬೆಂಗಳೂರು: ಮುರುಘಾಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕದೌರ್ಜನ್ಯದ  ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪರವಾಗಿ ನಿಂತ  ಹಿರಿಯ ವಕೀಲ ಶಂಕರಪ್ಪ ಎಂಬವರನ್ನು ಭಾರತ ಕಮ್ಯುನಿಸ್ಟ್ ( ಮಾರ್ಕ್ಸವಾದಿ ) ಪಕ್ಷದಿಂದ ಉಚ್ಛಾಟಿಸಲಾಗಿದೆ.  

'ಮುರುಘಾಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ  ಪ್ರಕರಣಕ್ಕೆ ಸಂಬಂಧಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶ್ರೀ ಶಂಕರಪ್ಪರವರು ಆರೋಪಿಯ ಪರವಾಗಿ ಕೇಸು ತೆಗೆದುಕೊಂಡು ಪಕ್ಷದ ನಿಲುವು ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಕರ್ನಾಟಕ ರಾಜ್ಯ ಸಮಿತಿಯು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ' ಎಂದು ಸಿಪಿಎಂ ರಾಜ್ಯ ಸಮಿತಿ ಕಾರ್ಯದರ್ಶಿ ಯು. ಬಸವರಾಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ>>> ಲೈಂಗಿಕ ಕಿರುಕುಳದ ಆರೋಪ: ಮುರುಘಾ ಶ್ರೀ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News