ಮುರುಘಾಶ್ರೀ ಬಂಧನ ವಿಚಾರ: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

Update: 2022-09-02 05:48 GMT

ಮಂಗಳೂರು: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಬಂಧನ ವಿಚಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B. S. Yediyurappa) ಪ್ರತಿಕ್ರಿಯಿಸಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಎಲ್ಲ ವಿಚಾರಗಳಿಗೂ ಉತ್ತರ ಕೊಡುವಂತ ಅವಶ್ಯಕತೆ ಇಲ್ಲ.  ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ. ಈ ಬಗ್ಗೆ ಪೊಲೀಸರಿಗೆ ಮುಕ್ತವಾಗಿ ಕಾರ್ಯನಿರ್ವಹಿಸಲು ಸ್ವಾತಂತ್ರ್ಯ ನೀಡಲಾಗಿದೆ.  ಆದ್ದರಿಂದ ಈ ಸಂದರ್ಭದಲ್ಲಿ ಶ್ರೀಗಳ ಬಂಧನ ಮತ್ತು ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ' ಎಂದು ಹೇಳಿದರು. 

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ,  'ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ' ಎಂದು ಹೇಳಿದರು.

'ಇದು ಎಲ್ಲರಿಗೂ ಗೊತ್ತಿರೋ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು ಆದರೆ ಆಗಿದೆ' ಎಂದು ಹೇಳಿದರು. 

ಇದನ್ನೂ ಓದಿ:  ಮುರುಘಾ ಶರಣರು ಆರೋಪ ಮುಕ್ತರಾಗಲಿದ್ದಾರೆ: ಬಿ.ಎಸ್. ಯಡಿಯೂರಪ್ಪ 

ಇದನ್ನೂ ಓದಿ>>> ಎದೆನೋವು: ಮುರುಘಾಶ್ರೀಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News