ಸಾಗರ : ಯುವಕ ಆತ್ಮಹತ್ಯೆ

Update: 2022-09-04 09:35 GMT

ಸಾಗರ : ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಗರದ ಎಸ್.ಎನ್ ನಗರ ಹೊಸಬಡಾವಣೆಯಲ್ಲಿ  ರವಿವಾರ ನಡೆದಿದೆ.

ನಾಗರಾಜ್ (23) ಮೃತರು ಎಂದು ಗುರುತಿಸಲಾಗಿದೆ.

ಗ್ಯಾಸ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು.

ಮೃತ ನಾಗರಾಜ್ ಅವರ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.

ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಗೋವರ್ಧನ್, ಎಎಸ್ಐ ಹಾಲಪ್ಪ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News