ಮಡಿಕೇರಿ: ರಸ್ತೆ ಬದಿಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

Update: 2022-09-04 13:17 GMT

ಮಡಿಕೇರಿ, ಸೆ. 4:  ಮೈಸೂರಿಗೆ ತೆರಳುತ್ತಿದ ಕೆಎಸ್ಸಾರ್ಟಿಸಿ ಬಸ್ ಒಂದು ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ, 21 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್‌ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. 

ಅದೃಷ್ಟವಶಾತ್ ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. 

ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News