ಸಿಂ ಬೊಮ್ಮಾಯಿ ಭೇಟಿಯಾದ ಕೆಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಘನ್

Update: 2022-09-05 16:12 GMT

ಬೆಂಗಳೂರು, ಸೆ.5:  ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್, ಮುರುಘನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. 

ಅಧಿಕೃತ ಪ್ರವಾಸ ನಿಮಿತ್ತ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದ ಸಚಿವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸೌಹಾರ್ದ ಭೇಟಿಯಾದರು.

ಈ ಸಮಯದಲ್ಲಿ ಕೇಂದ್ರ ಸಚಿವರು ಪಶುಸಂಗೋಪನೆ, ಮೀನುಗಾರಿಕೆ ಇತ್ಯಾದಿ ವಿಷಯ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News