ಚಂದ್ರಶೇಖರ್ ಭಟ್‌ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Update: 2022-09-06 12:24 GMT

ಹೆಬ್ರಿ, ಸೆ.6: ಹೆಬ್ರಿಯ ಚಾಣಕ್ಯ ಎಜುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಅವರಿಗೆ ಸೋಮವಾರ ಪ್ರದಾನ ಮಾಡಲಾಯಿತು.

ಉದ್ಯಮಿ ಬಿ.ಹರ್ಷ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಚಾಣಕ್ಯ ಟ್ಯುಟೋರಿ ಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಚಾಣಕ್ಯ ಸಂಸ್ಥೆಯ ಸಾಧಕ ವಿದ್ಯಾರ್ಥಿ ಯಶೋಧ ಶೆಟ್ಟಿ ಅವರನ್ನು ಸಮ್ಮಾನಿಸ ಲಾಯಿತು. ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.

ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ, ಮೂಡುಬಿದ್ರೆ ತಾಲ್ಲೂಕು ದೈಹಿಕ ಶಿಕ್ಷಣಾಧಿ ಕಾರಿ ನಿತ್ಯಾನಂದ ಶೆಟ್ಟಿ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ ಶೆಟ್ಟಿ, ಕಾರ್ಯದರ್ಶಿ ರವೀಂದ್ರನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಹೆಬ್ರಾಯ್ ಸಂಸ್ಥೆ ಅಧ್ಯಕ್ಷ ದಿನಕರ ಪ್ರಭು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News