ಹೃದಯಾಘಾತ: ಸಚಿವ ಉಮೇಶ್ ಕತ್ತಿ ಆಸ್ಪ್ರತ್ರೆಗೆ ದಾಖಲು
Update: 2022-09-06 17:57 GMT
ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿರುವ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಆಹಾರ ಹಾಗೂ ಅರಣ್ಯ ಖಾತೆಯನ್ನು ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ನಸೀಬು ಚೆನ್ನಾಗಿದ್ದರೆ ನಾನು ಮುಖ್ಯಮಂತ್ರಿ ಆಗ್ತೀನಿ: ಸಚಿವ ಉಮೇಶ್ ಕತ್ತಿ