ಸಕ್ಕರೆ ಉದ್ಯಮಕ್ಕೆ ಉಮೇಶ್ ಕತ್ತಿ ಕೊಡುಗೆ ಮರೆಯುವಂತಿಲ್ಲ: ಡಿ.ಕೆ ಶಿವಕುಮಾರ್

Update: 2022-09-07 06:15 GMT

ಬೆಂಗಳೂರು: 'ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

 ' ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ. ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ. ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News