ಗೋವಾದಲ್ಲಿ ರಸ್ತೆ ಅಪಘಾತ: ಕಾರವಾರ ಮೂಲದ ಒಂದೇ ಕುಟುಂಬದ ಮೂವರು ಮೃತ್ಯು

Update: 2022-09-08 08:06 GMT

ಕಾರವಾರ: ಗೋವಾದ ಕಾಣಕೋಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರವಾರ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಕಾರವಾರ ತಾಲೂಕಿನ ಮಾಜಾಳಿ ಮೂಲದ ಸದ್ಯ ವಾಸ್ಕೋ ನಿವಾಸಿಗಳಾಗಿದ್ದ ಉಲ್ಲಾಸ ನಾಗೇಕರ್, ಅವರ ಪತ್ನಿ ವೀಣಾ ನಾಗೇಕರ್ ಹಾಗೂ ಅವರ ಪುತ್ರ ಹರೀಶ್ ನಾಗೇಕರ್ ಮೃತರು ಎಂದು ತಿಳಿದು ಬಂದಿದೆ. 

ಉಲ್ಲಾಸ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಕಾರಿನಲ್ಲಿ ವಾಸ್ಕೋದಿಂದ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯ ದರ್ಶನ ಮಾಡಿಕೊಂಡು, ವಾಪಸ್ಸು ವಾಸ್ಕೋಗೆ ತೆರಳುತ್ತಿದ್ದರು. ಈ ವೇಳೆ ಗೋವಾದ ಕಾಣಕೋಣದ ಮನೋಹರ್ ಪರಿಕ್ಕರ್ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಉಲ್ಲಾಸ್ ಅವರ ಕುಟುಂಬದ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು,  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News