ಸೆ.12ರಂದು ಕೊರಗರಿಂದ ಪ್ರತಿಭಟನಾ ಸಭೆ
Update: 2022-09-09 16:47 GMT
ಉಡುಪಿ, ಸೆ.9: ಉಡುಪಿ ಜಿಲ್ಲಾ ಕೊರಗ ಸಂಘಟನೆ ನೇತೃತ್ವದಲ್ಲಿ ಕೊರಗ ಸಮುದಾಯದ ವೈದ್ಯಕೀಯ ವೆಚ್ಚ ಮರುಪಾವತಿ ಅನುದಾನ ರದ್ದುಗೊಳಿಸಿರುವ ಆದೇಶ ವಾಪಾಸು ಪಡೆಯಲು ಒತ್ತಾಯಿಸಿ ಸೆ.12ರಂದು ಉಡುಪಿ ಜಿಲ್ಲಾಧಿ ಕಾರಿ ಕಚೇರಿ ಎದುರು ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 11ಗಂಟೆಗೆ ಮಣಿಪಾಲ ಟೈಗರ್ ಸರ್ಕಲ್ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಡೋಲಿನ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನಾ ಸಭೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಉಡುಪಿ ಜಿಲ್ಲಾ ಕೊರಗರ ಸಂಘದ ಅಧ್ಯಕ್ಷೆ ಗೌರಿ ಕೊರಗ ಕೆಂಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.