ಭಟ್ಕಳ; ಕಲ್ಲು ಕ್ವಾರೆಯಲ್ಲಿ ಮುಳುಗಿ ಬಾಲಕ ಮೃತ್ಯು
Update: 2022-09-09 18:17 GMT
ಭಟ್ಕಳ: ತಾಲೂಕಿನ ಶಿರಾಲಿ ಕಲ್ಲು ಕ್ವಾರೆಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ಕಾರಗದ್ದೆ ನಿವಾಸಿ ಝುಬೈರ್ ಇರ್ಶಾದ್ (17) ಎಂದು ಗುರುತಿಸಲಾಗಿದೆ.
ಕಲ್ಲು ಕ್ವಾರಿ ನಡೆಸಿ ಸದ್ಯ ಖಾಲಿ ಇರುವ ಈ ಸ್ಥಳದಲ್ಲಿ ಮಳೆ ನೀರು ತುಂಬಿದ್ದು, ಇದರ ಬಗ್ಗೆ ಮಾಹಿತಿ ಇಲ್ಲದ ಇರ್ಶಾದ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಈ ಸಂದರ್ಭ ತಹಶೀಲ್ದಾರ್ ಡಾ. ಸುಮಂತ ಬಿ, ಭಟ್ಕಳ ಗ್ರಾಮೀಣ ಠಾಣೆ ಸಿ.ಪಿ.ಐ ಮಾಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಭರತ್ ನಾಯಕ, ಭಟ್ಕಳ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಠಾಣಾಧಿಕಾರಿ ರಮೇಶ್, ಎಸ್.ಡಿ.ಆರ್.ಎಫ್ ತಂಡ ಹಾಗೂ ಮಾವಳ್ಳಿ ಕಂದಾಯ ನಿರೀಕ್ಷಕರಾದ ಶ್ರೀನಿವಾಸ ಮಾಸ್ತಿ ಘಟನಾ ಸ್ಥಳಕ್ಕೆ ಆಗಮಿಸಿದ್ದರು.