ದೊಡ್ಡಬಳ್ಳಾಪುರದಲ್ಲಿ ನಡೆದ 'ಜನಸ್ಪಂದನ' ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ ಮೃತ್ಯು
Update: 2022-09-10 13:56 GMT
ತುಮಕೂರು: ದೊಡ್ಡಬಳ್ಳಾಪುರದಲ್ಲಿ ಇಂದು (ಶನಿವಾರ) ನಡೆದ ರಾಜ್ಯ ಸರಕಾರದ 'ಜನ ಸ್ಪಂದನ' ಕಾರ್ಯಕ್ರಮಕ್ಕೆ ಆಗಮಿಸಿದ್ದ ವೃದ್ಧರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತರನ್ನು ತುಮಕೂರು ಜಿಲ್ಲೆಯ ಕೊರಟಿಗೆರೆ ತಾಲೂಕಿನ ಕೋರ ಹೋಬಳಿ ಹಿರೇತೊಟ್ಲುಕೆರೆ ನಿವಾಸಿ, ಬಿಜೆಪಿ ಕಾರ್ಯಕರ್ತ ಸಿದ್ದಲಿಂಗಯ್ಯ (60) ಎಂದು ಗುರುತಿಸಲಾಗಿದೆ.
ತಕ್ಷಣ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದಿ ಬಂದಿದೆ.
ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷಗಳ ಸಾರ್ಥಕ ಸೇವೆ ಮತ್ತು ಸಬಲಿಕರಣದ ಕಾರ್ಯದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ ‘ಜನಸ್ಪಂದನ' ಸಮಾವೇವನ್ನು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ಆಯೋಜಿಸಿತ್ತು.