ಬೆಳ್ಳಾರೆ; ಸಂಘ ಪರಿವಾರದ ಕಾರ್ಯಕರ್ತನಿಗೆ ಬೆದರಿಕೆ ಪ್ರಕರಣ: ಆರೋಪಿಗೆ ಜಾಮೀನು

Update: 2022-09-11 16:17 GMT

ಸುಳ್ಯ: ಬೆಳ್ಳಾರೆಯ ಸಂಘ ಪರಿವಾರದ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿದ್ದ ಸಫ್ರೀದ್ ಎಂಬಾತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ಎಂಬಾತ ಪ್ರಶಾಂತ್ ಪೂಂಜ ಎಂಬವರಿಗೆ, ಜೀವ ಬೆದರಿಕೆ ಒಡ್ಡಿರುವುದಾಗಿ ಶನಿವಾರ ಪೊಲೀಸ್ ದೂರು ನೀಡಲಾಗಿತ್ತು.

ಪೊಲೀಸರು ಬಜ್ಪೆಯಲ್ಲಿ ಆರೋಪಿ ಸಫ್ರೀದ್ ನನ್ನು ಬಂಧಿಸಿದ್ದರು. ರವಿವಾರ ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News