‘ಹಿಂದಿ ದಿವಸ’ ಆಚರಿಸದಂತೆ ಸಿಎಂ ಬೊಮ್ಮಾಯಿಗೆ ಕುಮಾರಸ್ವಾಮಿ ಪತ್ರ

Update: 2022-09-12 14:12 GMT

ಬೆಂಗಳೂರು, ಸೆ.12: ಭಾರತವು ಸಾವಿರಾರು ಭಾಷೆ ಹಆಗೂ ಉಪ ಭಾಷೆಗಳನ್ನು ಒಳಗೊಂಡ, 560ಕ್ಕೂ ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೆ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಸೆ.14ರಂದು ಭಾರತ ಒಕ್ಕೂಟ ಸರಕಾರದ ಪ್ರಾಯೋಜಿತ ಕಾರ್ಯಕ್ರಮವಾದ ‘ಹಿಂದಿ ದಿವಸ’ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೆ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News