×
Ad

ಸೆ.22ರಂದು ‘ಕೆವೈಸಿ’ಗೆ ಕೊನೆಯ ಅವಕಾಶ

Update: 2022-09-12 21:38 IST

ಮಂಗಳೂರು, ಸೆ.12: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್)ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಸೆ. 22 ಕೊನೆಯ ದಿನವಾಗಿದೆ.

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು ಪೋರ್ಟಲ್‌ನ ಫಾರ್ಮರ್ಸ್‌ ಕೋರ್ನರ್‌ನ ಇ-ಕೆವೈಸಿ ಅವಕಾಶದಡಿ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ  ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ  ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News