ಸಾಗರ | ಅಪರಿಚಿತ ವಾಹನ ಢಿಕ್ಕಿ: ಬೈಕ್‌ ಸವಾರ ಯುವಕ ಸ್ಥಳದಲ್ಲೇ ಮೃತ್ಯು

Update: 2022-09-13 06:00 GMT
ರಂಜಿತ್ ಕುಮಾರ್ - ಮೃತ ಯುವಕ

ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಶಾಲೆಯ ಬಳಿ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. 

ಬೈಕ್‌ ಚಲಾಯಿಸುತ್ತಿದ್ದ ಕುಗ್ವೆ ಗ್ರಾಮದ ನಿವಾಸಿ ರಂಜಿತ್ ಕುಮಾರ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಢಿಕ್ಕಿಹೊಡೆದ ಅಪರಿಚಿತ ವಾಹನದ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News