ಭದ್ರಾವತಿ | ಗಣಪತಿ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿ ಮನೋಜ್ ಕುಮಾರ್ ವಶಕ್ಕೆ
Update: 2022-09-13 12:13 IST
ಶಿವಮೊಗ್ಗ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಓರ್ವ ಯುವಕನಿಗೆ ಚಾಕು ಇರಿದ ಘಟನೆ ರವಿವಾರ ಭದ್ರಾವತಿ ನಗರದ ಶಿವರಾಮ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮಂಜುನಾಥ ಚೂರಿ ಇರಿತದಲ್ಲಿ ಗಾಯಗೊಂಡ ಯುವಕನಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಮಂಜುನಾಥನ ಪರಿಚಿತ ಮನೋಜ್ ಕುಮಾರ್ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಹಳೇ ವೈಷಮ್ಯ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ.
ಇದನ್ನೂ ಓದಿ: ಕಲಬುರಗಿ | ಗಣೇಶೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಪ್ರಚೋದನಕಾರಿ ಹಾಡು: ಸ್ವಯಂ ಪ್ರೇರಿತ ಪ್ರಕರಣ ದಾಖಲು