×
Ad

ಕಿರುಚಿತ್ರ ನಿರ್ಮಾಣ ಸ್ಪರ್ಧೆ: ಅವಧಿ ವಿಸ್ತರಣೆ

Update: 2022-09-13 21:13 IST

ಉಡುಪಿ, ಸೆ.13: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಭಾಗದ ಜನವಸತಿ ಪ್ರದೇಶಗಳಲ್ಲಿ ಬೂದು ನೀರು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜೀವ ಜಲ-ಜಲ ನಿಧಿ ವಿಷಯಕ್ಕೆ ಸಂಬಂಧಿಸಿದಂತೆ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಕನ್ನಡ, ತುಳು ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದೆ. 

ಈ ಬಗ್ಗೆ ಸಿದ್ಧಪಡಿಸಲಾದ ವೀಡಿಯೋಗಳನ್ನು ಇ-ಮೇಲ್  -nbaudp@gmail.com- ನಲ್ಲಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ ೧೭ರವರೆಗೆ ವಿಸ್ತರಿಸಲಾಗಿದೆ. ಪ್ರಶಸ್ತಿಯು ನಗದು ಬಹುಮಾನವನ್ನು ಒಳಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9964443064 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News