ಉಚ್ಚಿಲದಲ್ಲಿ ರಸ್ತೆ ಅಪಘಾತ: ತಂದೆ ಮೃತ್ಯು, ಪುತ್ರ ಗಂಭೀರ

Update: 2022-09-14 05:29 GMT

ಕಾಪು, ಸೆ.14: ಅಪರಿಚಿತ ವಾಹನವೊಂದು ಢಿಕ್ಕಿ (Accident) ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರ ಪುತ್ರ ಗಂಭೀರ ಗಾಯಗೊಂಡಿದ್ದಾರೆ.

ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದೆ. ಅವರ ಪುತ್ರ ಸಮರ್ಥ್ (14) ಗಂಭೀರ ಗಾಯಗೊಂಡಿದ್ದು ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲೆಂದು ಪ್ರಭಾಕರ್ ಅವರು ಪುತ್ರ ಸಮರ್ಥ್ ಜೊತೆ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸಿನಲ್ಲಿ ಹೊರಟವರು ಇಂದು ಬೆಳಗ್ಗೆ ಉಚ್ಚಿಲದಲ್ಲಿ ಬಂದಿಳಿದಿದ್ದರು. ಇವರಿಬ್ಬರು ರಸ್ತೆಬದಿಯಲ್ಲಿ ನಿಂತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾರ್ಕಳ | ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ

ಅಪಘಾತದ ತೀವ್ರತೆಗೆ ಪ್ರಭಾಕರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಾಲಕ ಸಮರ್ಥ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಡುಬಿದ್ರೆ‌ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News