ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನವಾಡೆ

Update: 2022-09-14 06:34 GMT
Photo:TWITTER/@SHETSADANAND

ಪಣಜಿ: ಗೋವಾದ ಎಂಟು ಕಾಂಗ್ರೆಸ್ ಶಾಸಕರು(congress MLA) ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸದಾನಂದ ತಾನವಾಡೆ ಹೇಳಿದ್ದಾರೆ ಎಂದು  ಸುದ್ದಿ ಸಂಸ್ಥೆ PTI ವರದಿ ಮಾಡಿದೆ.

ಕೇವಲ ಎರಡು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ತನ್ನ ಶಾಸಕರ ಪಕ್ಷಾಂತರದ ಪ್ರಯತ್ನವನ್ನು ವಿಫಲಗೊಳಿಸಿತ್ತು.

  ಕಾಂಗ್ರೆಸ್ ನ 11 ಶಾಸಕರ ಪೈಕಿ ಎಂಟು ಶಾಸಕರು ವಿಧಾನಸಭಾ ಸ್ಪೀಕರ್ ಹಾಗೂ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿರುವುದು ಹೊಸ ಊಹಾಪೋಹಗಳಿಗೆ ಕಾರಣವಾಗಿದೆ.

ಪ್ರಮುಖ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಎಂಟು ಮಂದಿ ಶಾಸಕರು ಇಂದು ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ದಿಗಂಬರ್ ಕಾಮತ್ ಹಾಗೂ  ಮೈಕೆಲ್ ಲೋಬೋ ಜುಲೈನಲ್ಲಿ ಬಿಜೆಪಿ ಸೇರುತ್ತಾರೆಂಬ ಊಹಾಪೋಹದ ಕೇಂದ್ರ ಬಿಂದುವಾಗಿದ್ದರು. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್  ಪಕ್ಷವು ಸ್ಪೀಕರ್ ಅವರನ್ನು ವಿನಂತಿಸಿತ್ತು. ವಿರೋಧ ಪಕ್ಷದ ನಾಯಕರಾಗಿ ಮೈಕೆಲ್ ಲೋಬೊ ಅವರನ್ನು ತೆಗೆದುಹಾಕುವುದಾಗಿ ಅದು ಘೋಷಿಸಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News