ಹುಬ್ಬಳ್ಳಿ | ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ: ಮಹಿಳೆ ಸಹಿತ ಮೂವರು ಮೃತ್ಯು

Update: 2022-09-14 05:49 GMT
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ, ಸೆ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ (Accident) ಹೊಡೆದ ಪರಿಣಾಮ ಮಹಿಳೆ ಸಹಿತ ಮೂವರು ಮೃತಪಟ್ಟ ಘಟನೆ ತಾಲೂಕಿನ ವರೂರು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಾರು ಚಾಲಕ, ದಾವಣಗೆರೆ ಮೂಲದ ಶಾರುಕ್(27), ಸುಹೈಲ್(26) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆಲದೂರು ನಿವಾಸಿ ಸುಶೀಲಾ(35) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಉಚ್ಚಿಲದಲ್ಲಿ ರಸ್ತೆ ಅಪಘಾತ: ತಂದೆ ಮೃತ್ಯು, ಪುತ್ರ ಗಂಭೀರ

ಅವಲಕ್ಕಿ ವ್ಯಾಪಾರ ನಡೆಸುತ್ತಿದ್ದ ಇವರು ಕಳೆದ ರಾತ್ರಿ ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ವೇಳೆ ವರೂರು ಗ್ರಾಮದ ಗಣೇಶ್ ಹೊಟೇಲ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಸುಹೈಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಕಾರು ಚಲಾಯಿಸುತ್ತಿದ್ದ ಶಾರುಕ್ ಹಾಗೂ ಸುಶೀಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News