ಮೈಸೂರು: ಕೆಎಸ್‌ಒಯು ಆವರಣದಲ್ಲಿ ವಾಮಾಚಾರ; ದೂರು

Update: 2022-09-14 09:09 GMT

ಮೈಸೂರು, ಸೆ.14: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕೋಳಿ ತಲೆ, ಕಾಲು ಕತ್ತರಿಸಿ ಕುಂಕುಮವಿಟ್ಟು ವಾಮಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಕೆಎಸ್‌ಒಯು ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಕೊಠಡಿ ಎದುರು ಮಂಗಳವಾರ ಈ ಘಟನೆ ನಡೆದಿದ್ದು, ಕೋಳಿ ಅಂಗಾಗಳ ಜೊತೆಗೆ ಕುಂಕುಮ, ಬಳೆ ಚೂರು ಹಾಗೂ ಹಿಂದಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಭಾವಚಿತ್ರ ಕತ್ತರಿಸಿಟ್ಟು ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ತೇಜಸ್ವಿ ನವಿಲೂರು ಅವರಿಗೆ ವಾಮಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆರು ತಿಂಗಳ ಹಿಂದೆಯೇ ತೇಜಸ್ವಿ ನವಿಲೂರು ಅವರು ಎಚ್‌ ಓಡಿ ಸ್ಥಾನದಿಂದ ಬದಲಾಗಿದ್ದರು. ಹೊಸ ಎಚ್‌ಓಡಿ ಸುಪರ್ದಿಯಲ್ಲಿ ಈ ಕೊಠಡಿ ಇತ್ತು ಎನ್ನಲಾಗಿದೆ.

ಈ ಸಂಬಂಧ ತೇಜಸ್ವಿ ನವಿಲೂರು ಅವರು ಪೊಲೀಸರಿಗೆ ದೂರು ನೀಡಿದ್ದು, ದುಷ್ಕರ್ಮಿಗಳನ್ನು ಪತ್ತೆಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News