ರಾಜಾಹುಲಿ ಆದ್ರೂ ಕಾನೂನಿನ ಮುಂದೆ ಎಲ್ಲರೂ ಒಂದೇ..: ಯಡಿಯೂರಪ್ಪ ರಾಜೀನಾಮೆಗೆ ಬಿಜೆಪಿ ಶಾಸಕ ಯತ್ನಾಳ್ ಆಗ್ರಹ

Update: 2022-09-15 12:54 GMT

ಬೆಂಗಳೂರು, ಸೆ.15: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆಗ್ರಹಿಸಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.  ರಾಜಾಹುಲಿ ಇರಲಿ, ಎಷ್ಟೇ ದೊಡ್ಡ ಹುಲಿಯಾಗಲಿ. ಎಷ್ಟೇ ದೊಡ್ಡವರಾದರೂ ಕಾನೂನಿನ ಮುಂದೆ ಎಲ್ಲರೂ ಒಂದೆ. ಕೇಂದ್ರ ಚುನಾವಣಾ ಸಮಿತಿ ಸದಸ್ಯ ಸ್ಥಾನಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಈ ಹಿಂದೆ ಪಕ್ಷದ ರಾಷ್ಟ್ರೀಯ ಮುಖಂಡ ಎಲ್.ಕೆ ಅಡ್ವಾಣಿ ಅವರ ವಿರುದ್ಧವೂ ಆರೋಪ ಕೇಳಿ ಬಂದಿತ್ತು. ಆ ಸಂದರ್ಭದಲ್ಲಿ ಅವರು ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ರಾಜಾ ಹುಲಿ ಇರಲಿ ಯಾರೇ ಇರಲಿ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ವಾಜಪೇಯಿ, ಎಲ್.ಕೆ.ಅಡ್ವಾಣಿಗಿಂತ ಯಡಿಯೂರಪ್ಪರವರು ದೊಡ್ಡವರೇ? ಅವರು ರಾಜೀನಾಮೆ ನೀಡಿ ಅಡ್ವಾಣಿ ಅವರ ಆದರ್ಶ ಪಾಲಿಸಲಿ ಎಂದು ಖಾರವಾಗಿ ಹೇಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News