ಬೆಂಗಳೂರು: ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ

Update: 2022-09-16 15:57 GMT

ಬೆಂಗಳೂರು, ಸೆ.16: ಬಿಬಿಎಂಪಿಯ ದಾಸರಹಳ್ಳಿ ವಲಯ ನೆಲಗದರನಹಳ್ಳಿ ರಸ್ತೆ ರುಕ್ಮಿಣಿ ನಗರದಲ್ಲಿ 3 ಕಾಲು ಗುಂಟೆ ಜಾಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಶುಕ್ರವಾರವೂ ಮುಂದುವರಿಸಿದೆ. ಕೆಲ ಭಾಗದಲ್ಲಿ ಬಿಬಿಎಂಪಿ ಒತ್ತುವರಿಯನ್ನು ತೆರವುಗೊಳಿಸಿದ್ದು, ಇನ್ನು ಕೆಲವೆಡೆ ಮನೆಯ ಮಾಲಕರೇ ಸ್ವತಃ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಕೂಡಲೆ ಮಳೆ ನೀರುಗಾಲುವೆ ಮೇಲೆ ಇರುವ ಒತ್ತುವರಿ ಭಾಗವನ್ನು ತೆರವುಗೊಳಿಸಲು ಬಿಬಿಎಂಪಿ ಸೂಚನೆ ನೀಡಿದೆ. 

ಯಲಹಂಕ ವಲಯ ಕುವೆಂಪುನಗರ ವಾರ್ಡ್ ಸಿಂಗಾಪುರ ಲೇಔಟ್‍ನಲ್ಲಿ ಒತ್ತುವರಿಯಾಗಿದ್ದ ಸ್ಥಳದಲ್ಲಿ ಜೆಸಿಬಿ ಮೂಲಕ ಮಳೆ ನೀರುಗಾಲುವೆಯನ್ನು ನಿರ್ಮಾಣ ಮಾಡಲಾಗಿರುತ್ತದೆ. 

ಇನ್ನು ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಭೂಮಾಪಕ ಇಲಾಖೆ ವತಿಯಿಂದ ಕಂದಾಯ ಇಲಾಖೆಯ ತಹಶೀಲ್ದಾರ್‍ರ ನೇತೃತ್ವದಲ್ಲಿ ವಾಗ್ದೇವಿ ಮುನ್ನೇಕೊಳಲು, ಕಸವನಹಳ್ಳಿ ಗ್ರಾಮ, ದೊಡ್ಡಕನ್ನಹಳ್ಳಿಯಲ್ಲಿ ಬರುವ ಎ.ಬಿ.ಕೆ ವಿಲೇಜ್, ಪ್ರೆಸ್ಟೀಜ್ ಟೆಕ್ ಪಾರ್ಕ್, ವಿಪ್ರೋ, ಸನ್ನೀ ಬ್ರೂಕ್ಸ್, ಬೆಳತ್ತೂರು ಗ್ರಾಮ, ಸಾದರಮಂಗಲ ಗ್ರಾಮ, ಬಿಲ್ಲಿನೇನಿ ಸಾಸ ಅಪಾಟ್ಮ್‍ರ್ಂಟ್‍ನ ಒಳಪ್ರದೇಶ, ಸಾಯಿ ಗಾರ್ಡನ್ ಬಡಾವಣೆ, ವರ್ತೂರಿನಿಂದ ಶೀಲವಂತನ ಕೆರೆ ಸೇರಿದಂತೆ ಇನ್ನಿತರೆ ಕಡೆ ಸರ್ವೇ ಕಾರ್ಯ ನಡೆಸಿ ಮಾರ್ಕಿಂಗ್ ಮಾಡಲಾಗುತ್ತಿದೆ. 

ಸರ್ವೇ ಮಾಡಿ ಮಾರ್ಕಿಂಗ್ ಕಾರ್ಯ ಮುಗಿದ ಬಳಿಕ ಖಾಲಿ ಜಾಗ, ಕಾಂಪೌಂಡ್ ಗೋಡೆಗಳಿದ್ದಲ್ಲಿ ಕೂಡಲೆ ತೆರವು ಕಾರ್ಯಾಚರಣೆ ನಡೆಸಲಾಗುವುದು. ರಾಜಕಾಲುವೆಗಳ ಮೇಲೆ ಜನರು ವಾಸಿಸುವ ಮನೆಗಳಿದ್ದಲ್ಲಿ, ಸಂಬಂಧಪಟ್ಟವರಿಗೆ ಕಂದಾಯ ಇಲಾಖೆಯ ತಹಶಿಲ್ದಾರರಿಂದ ನೋಟಿಸ್ ನೀಡಿ ಮೂರು ದಿನ ಕಾಲಾವಕಾಶ ನೀಡಲಾಗುತ್ತದೆ. ಅದಾದ ಬಳಿಕ ನಿಯಮಾನುಸಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಹದೇವಪುರ ವಲಯ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News