ಬಾಗೇಪಲ್ಲಿ: ಸೆ.18ರಂದು ಸಿಪಿಎಂ ರಾಜಕೀಯ ಸಮಾವೇಶ
Update: 2022-09-16 16:26 GMT
ಬೆಂಗಳೂರು, ಸೆ.16: ಸೌಹಾರ್ದ, ಸಮೃದ್ಧ, ಜನತಾ ಕರ್ನಾಟಕ ನಿರ್ಮಾಣಕ್ಕಾಗಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾಕ್ರ್ಸ್ವಾದಿ) ವತಿಯಿಂದ ರಾಜ್ಯ ಮಟ್ಟದ ಬೃಹತ್ ರಾಜಕೀಯ ಸಮಾವೇಶವು ಸೆ.18ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೆಎಚ್ಬಿ ಲೇಔಟ್(ಕೆಎಸ್ಸಾರ್ಟಿಸಿ ಬಸ್ ಡಿಪೋ ರಸ್ತೆ)ನಲ್ಲಿ ನಡೆಯಲಿದೆ. ಇದಕ್ಕೆ ಮುಂಚಿತವಾಗಿ ಬೆಳಗ್ಗೆ 11 ಗಂಟೆಗೆ ನ್ಯಾಷನಲ್ ಕಾಲೇಜು ಮುಂಭಾಗದಿಂದ ಬೃಹತ್ ಮೆರವಣಿಗೆ ನಡೆಯಲಿದೆ.
ಸಮಾವೇಶಕ್ಕೆ ಕೇರಳ ರಾಜ್ಯ ಸರಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಲಿದ್ದಾರೆ. ಸಿಪಿಎಂ ಪೊಲಿಟ್ ಬ್ಯೂರೋ ಸದಸ್ಯರಾದ ಎಂ.ಎ.ಬೇಬಿ ಹಾಗೂ ಬಿ.ವಿ. ರಾಘವಲು, ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.