ಸಿದ್ದರಾಮಯ್ಯ ದೇಶದ ಅತಿ ಗಣ್ಯ ವ್ಯಕ್ತಿಯಾಗಿರುವುದರಿಂದ ಹೆಚ್ಚಿನ ಭದ್ರತೆ ಕೊಟ್ಟಿದ್ದೇವೆ: ಸಚಿವ ಗೋಪಾಲಯ್ಯ

Update: 2022-09-17 18:30 GMT

ಮಂಗಳೂರು: 'ವಿಧಾನ ಸಭೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ (Siddaramaiah) ದೇಶದ ಹಾಗೂ ರಾಜ್ಯದ ಅತಿ ಗಣ್ಯವ್ಯಕ್ತಿಯಾಗಿರುವುದರಿಂದ ಅವರಿಗೆ ಭದ್ರತೆ ಕೊಡಲಾಗಿದೆ' ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. 

ಈ ಕುರಿತು ಹಾಸನ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, 'ಇತ್ತೀಚೆಗೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವ ಪ್ರಸಂಗ ನಡೆದಿರುವ ಹಿನ್ನೆಲೆಯಲ್ಲಿ ಹಾಗೂ ಅವರೊಬ್ಬ ರಾಜ್ಯದ  ಮಾಜಿ ಮುಖ್ಯಮಂತ್ರಿಯೂ ಆಗಿರುವುದರಿಂದ ಅವರಿಗೆ ಸರಕಾರ ಹೆಚ್ಚಿನ ಭದ್ರತೆ ಕೊಟ್ಟಿದೆ' ಎಂದು ತಿಳಿಸಿದರು. 

' ಸರಕಾರ ಏನೂ ಕಣ್ಣು ಮುಚ್ಚಿ ಕೊಟ್ಟಿಲ್ಲ. ಮುಂಜಾಗೃತ ಕ್ರಮವಾಗಿ ಭದ್ರತೆ ಕೊಡಲಾಗಿದೆ' ಎಂದು ಹೇಳಿದರು. 

ಜೀವ ಬೆದರಿಕೆ ಹಾಗೂ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರಕಾರ ಹೆಚ್ಚಿನ ಭದ್ರತೆ ಒದಗಿಸಿತ್ತು. ಬಳಿಕ  ಹೆಚ್ಚುವರಿ ಭದ್ರತಾ ಸಿಬ್ಬಂದಿ ಒದಗಿಸಿದೆ. ಅವರ ಶಿವಾನಂದ ವೃತ್ತ ಸಮೀಪದಲ್ಲಿರುವ ಸರಕಾರಿ ನಿವಾಸಕ್ಕೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ:  ದಸರಾಗೆ ಪ್ರಧಾನಿ ಮೋದಿ ಬರುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News