ಕೊಲೆಯತ್ನ ಪ್ರಕರಣ: ಆರೋಪಿ ಸೆರೆ

Update: 2022-09-18 16:18 GMT

ಉಳ್ಳಾಲ: ನಾಲ್ಕು ತಿಂಗಳ ಹಿಂದೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿದ್ದ ಯುವಕನೋರ್ವನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತಲ್ಹತ್‌ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಮೇ ತಿಂಗಳಲ್ಲಿ  ಆರೀಫ್ ಎಂಬಾತನ ಕೊಲೆಯತ್ನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನೌಫಾಲ್, ತಲ್ಹತ್‌ ತಲೆಮರೆಸಿಕೊಂಡಿದ್ದು, ಈ ಪೈಕಿ ತಲ್ಹತ್‌ ನನ್ನು ರವಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News