ಇಚ್ಲಂಗೋಡು | ಕೆರೆಗೆ ಸ್ನಾನಕ್ಕಿಳಿದ ಯುವಕ ನೀರಲ್ಲಿ ಮುಳುಗಿ ಮೃತ್ಯು

Update: 2022-09-19 05:31 GMT

ಕಾಸರಗೋಡು, ಸೆ.19: ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ಕುಂಬಳೆ ಠಾಣಾ ವ್ಯಾಪ್ತಿಯ ಬಂದ್ಯೋಡು ಸಮೀಪದ ಇಚ್ಲಂಗೋಡು ಎಂಬಲ್ಲಿ ನಡೆದಿದೆ.

ಕುಂಬಳೆ ಮಾವಿನಕಟ್ಟೆ ನಿವಾಸಿ ಝೈನುದ್ದೀನ್ ಎಂಬವರ ಪುತ್ರ ಸಿನಾನ್(20) ಮೃತಪಟ್ಟವರು. ಇಚ್ಲಂಗೋಡು ಚಿನ್ನ ಮೊಗರ್ ಎಂಬಲ್ಲಿ ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

 ಜೊತೆಯಲ್ಲಿದ್ದವರು ಹಾಗೂ ಪರಿಸರವಾಸಿಗಳು ಸಿನಾನ್ ರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ.

ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು | ಉರುಳಿಬಿದ್ದ ಬೈಕ್: ಸವಾರ ಮೃತ್ಯು, ಸಹಸವಾರ ಗಂಭೀರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News