ಬೆಂಗಳೂರು: ತಾಯಿ ಸಾವು ಬೆನ್ನಲ್ಲೇ ಪುತ್ರ ಆತ್ಮಹತ್ಯೆ

Update: 2022-09-19 14:31 GMT

ಬೆಂಗಳೂರು: ತಾಯಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪುತ್ರನ ಮೃತದೇಹ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನೆಲಮಂಗಲದ ಸುಧಾನಗರದಲ್ಲಿ ವರದಿಯಾಗಿದೆ. ಬಸವೇಶ್ವರ ನಗರ ನಿವಾಸಿ ರಾಮಕೃಷ್ಣಯ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೆ.10 ರಂದು ಅತ್ತೆ ಮನೆಗೆ ಹೋಗಿ 11ಕ್ಕೆ ವಾಪಸ್ ಬರುತ್ತೇನೆಂದು ಹೇಳಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೌಡಯ್ಯನಪಾಳ್ಯಕ್ಕೆ ಬಂದಿದ್ದರು. ಆದರೆ ವಾಪಸ್ ಮನೆಗೆ ಹೋಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದು, ಇಂದು ಕೆರೆಯಲ್ಲಿ ಮೃತದೇಹ ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಮದ್ಯದಂಗಡಿಯಲ್ಲಿ ರಾಮಕೃಷ್ಣಯ್ಯ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೇ ಅವರ ತಾಯಿ ನಿಧನರಾಗಿದ್ದರು. ತಾಯಿಯ ಸಾವಿನಿಂದ ಮನನೊಂದಿದ್ದ ಮಗ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News