ಕುಂದಾಪುರ; ಮನೆಗೆ ನುಗ್ಗಿ 3.66 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Update: 2022-09-19 15:17 GMT
ಸಾಂದರ್ಭಿಕ ಚಿತ್ರ

ಕುಂದಾಪುರ, ಸೆ.19: ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಪಂಪ್  ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿಯ ಮನೆಗೆ ಸೆ.17ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಪ್ರಸನ್ನ ನಾರಾಯಣ ಆಚಾರ್ಯ ಎಂಬವರ ಮನೆಯ ಎದುರಿನ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಬೆಡ್‌ರೂಂನ ಕಪಾಟಿನಲ್ಲಿದ್ದ ಚಿನ್ನದ ಲಕ್ಷ್ಮೀ ಹಾರ, ಬ್ರೇಸ್ಲೇಟ್, 4 ಬೆಳ್ಳಿಯ  ಲೋಟಗಳು, 4 ಬೆಳ್ಳಿಯ ಚಮಚ ಹಾಗೂ 12,000 ರೂ. ನಗದು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3,66,000ರೂ.  ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News