ಎನ್‌ಎಸ್‌ಯುಐ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Update: 2022-09-19 16:09 GMT

ಮಂಗಳೂರು : ಎನ್‌ಎಸ್‌ಯುಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ 2021-22 ನೇ ಸಾಲಿನ ಎಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕ್ಷೇತ್ರ ವ್ಯಾಪ್ತಿಯ ಸಾಧಕ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ  ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ತೊಕ್ಕೊಟ್ಟು-ಕಲ್ಲಾಪಿನ ಯುನಿಟಿ ಹಾಲ್‌ನಲ್ಲಿ ರವಿವಾರ ನಡೆಯಿತು.

ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಹ್ನಾಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಯುಐ ದ.ಕ.ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೊಳ್ಳಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಸಾಮಣಿಗೆ, ಯುವ ಕಾಂಗ್ರೆಸ್ ಉಳ್ಳಾಲ ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ರವೂಫ್ ಸಿ.ಎಂ, ಮಂಗಳೂರು ವಿಶ್ವವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೇಟ್ ಸದಸ್ಯ ಬಾಷಾ, ಎನ್‌ಎಸ್‌ಯುಐ ಮಂಗಳೂರು ವಿಶ್ವವಿದ್ಯಾನಿಲಯ ಘಟಕದ ಅಧ್ಯಕ್ಷ ಸಿರಾಜ್ ಗುದರು, ಎನ್‌ಎಸ್‌ಯುಐ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸಹ-ಸಂಯೋಜಕ ನಜೀಬ್ ಮಂಚಿ, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ, ಎನ್‌ಎಸ್‌ಯುಐ ಮುಖಂಡರಾದ ಫರೀದ್ ಬಪ್ಪು ಅಝೀಮ್,  ಸೈಫ್, ರಾಹೀಲ್, ಮುಹೈಮಿನ್ ಕೆಂಪಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News