ಚೆಸ್ ಪಂದ್ಯಾಟ : ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ

Update: 2022-09-20 04:58 GMT
ಪ್ರಜ್ವಲ್ ಎ.ಬಿ

ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ, ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈತ ಮುಂದಿನ ತಿಂಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಪುತ್ತೂರು ಜೀನಿಯಸ್ ಚೆಸ್ ಕೋಚ್ ಸತ್ಯಪ್ರಸಾದ್ ಕೋಟೆ ಇವರ ಶಿಷ್ಯರಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾಗಿದ್ದು ಪ್ರಸ್ತುತ ಬಂಟ್ವಾಳದಲ್ಲಿ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸವಲಿಂಗೇ ಗೌಡ - ಆಶಾ ದಂಪತಿಗಳ ಪುತ್ರನಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News