ಶಿಕ್ಷಕರ ನೇಮಕಾತಿ ಹಗರಣ: ವಿಜಯಪುರ ಜಿಲ್ಲೆಯಲ್ಲಿ ಮತ್ತೋರ್ವ ಶಿಕ್ಷಕನ ಬಂಧನ

Update: 2022-09-21 05:29 GMT
ಸಾಂದರ್ಭಿಕ ಚಿತ್ರ

ವಿಜಯಪುರ : 2014-15 ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಶಿಕ್ಷಕನೋರ್ವನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. 

ಅಶೋಕ್ ಚವ್ಹಾಣ್ ಬಂಧಿತ ಶಿಕ್ಷಕ ಎಂದು ತಿಳಿದು ಬಂದಿದೆ.  ಅಶೋಕ್ ಚೌಹಾಣ್ 2012-13 ಹಾಗೂ 2014-15 ರ ಸಾಲಿನಲ್ಲಿ ನಡೆಸಲಾಗಿರೊ ಶಿಕ್ಷಕರ ನೇಮಕಾತಿಯ ಸಿಇಟಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹಾಗೂ ನೇಮಕಾತಿಯಾಗಿ ಸೇವೆಗೆ ಹೋಗದವರ ಸ್ಥಾನಕ್ಕೆ ಅಕ್ರಮವಾಗಿ ನೇಮಕವಾಗಿರೋ ಆರೋಪ ಕೇಳಿ ಬಂದಿದೆ.

ಬೆಂಗಳೂರು ಸಿಓಡಿ ಅಧಿಕಾರಿಗಳ ಸೂಚನೆ ಮೇರೆಗೆ ಕಲಬುರಗಿ ಸಿಓಡಿ ಅಧಿಕಾರಿಗಳು ಬಂಧಿಸಿ ಬಳಿಕ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದ್ದು,  ಚಡಚಣ ತಾಲುಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಮಹೇಶ ಸೂಸಲಾದಿ ಹಾಗೂ ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಿದ್ರಾಮಪ್ಪ ಬಿರಾದಾರ್ ಬಂಧಿತ ಶಿಕ್ಷಕರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News