ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-09-29 16:22 GMT

ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ದೇವೇಗೌಡರ ಪದ್ಮನಾಭ ನಗರದ ನಿವಾಸದಕ್ಕೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು. 

ಈ ಸಂದರ್ಭದಲ್ಲಿ ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಹಾಜರಿದ್ದರು.

► ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಬಿ.ಎಸ್. ಯಡಿಯೂರಪ್ಪ

► ಇದನ್ನೂ ಓದಿ: ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News