ಸಾಲಬಾಧೆ: ರೈತ ಆತ್ಮಹತ್ಯೆ

Update: 2022-09-21 15:53 GMT
ಬೋಜೇಗೌಡ ಆತ್ಮಹತ್ಯೆ ಮಾಡಿಕೊಂಡಿರುವ ರೈತ

ಮಂಡ್ಯ, ಸೆ.21: ಬೆಳೆನಷ್ಟದ ಹಿನ್ನೆಲೆಯಲ್ಲಿ ಯುವ ರೈತನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಕಿಕ್ಕೇರಿ ಸಮೀಪದ ಶಂಕರಪುರ ಗ್ರಾಮದಲ್ಲಿ ನಡೆದಿದೆ.

ಬೋಜೇಗೌಡ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದು ಬಂದಿದೆ.

ನಿರಂತರ ಮಳೆಗೆ ಶುಂಠಿಬೆಳೆ ನಾಶವಾಗಿತ್ತು. ಉಳಿದ ಫಸಲಿಗೂ ಉತ್ತಮ ಬೆಲೆ ಸಿಕ್ಕಿರಲಿಲ್ಲವೆನ್ನಲಾಗಿದೆ. ಶುಂಠಿ ಬೆಳೆ ಬೇಸಾಯಕ್ಕೆ ಬೋಜೇಗೌಡ ಸಂಘಸಂಸ್ಥೆ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದು, ಸಾಲ ತೀರಿಸಲು ಸಾಧ್ಯವಾಗುವುದಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.

ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News