ಭಾರತ ಜೋಡೋ ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ನೇಮಕ

Update: 2022-09-21 16:51 GMT

ಮಂಗಳೂರು, ಸೆ. 21: ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡು ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನೇಮಕಗೊಳಿಸಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌ ಅವರು ಆದೇಶ ಹೊರಡಿಸಿರುತ್ತಾರೆ.

ನೂರುದ್ದೀನ್ ಸಾಲ್ಮರ ಅವರು ಪುತ್ತೂರಿನಲ್ಲಿ ನ್ಯಾಯವಾದಿ ಹಾಗೂ ನೋಟರಿಯಾಗಿ ಕೆಲಸ ನಿರ್ವಹಿಸುತ್ತಾ, ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News