ಬೋಳಂತೂರು: ಮನೆಯೊಂದರ ಮೇಲೆ ಪೊಲೀಸ್ ದಾಳಿ, ಪರಿಶೀಲನೆ

Update: 2022-09-22 04:19 GMT

ಬಂಟ್ವಾಳ, ಸೆ.22: ಪ್ರಕರಣವೊಂದಕ್ಕೆ ಸಂಬಂಧಿಸಿ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಗುರುವಾರ ಮುಂಜಾವ ಬಂಟ್ವಾಳ ತಾಲೂಕಿನ ಬೋಳಂತೂರಿನ ವ್ಯಕ್ತಿಯೋರ್ವನ ಮನೆಗೆ ದಾಳಿ ಮಾಡಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.

ಬೊಳಂತೂರು ನಿವಾಸಿ ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ತಫ್ಸೀರ್ ಎಂಬವರ ಮನೆಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಯಾವ ಪ್ರಕರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆದಿದೆ ಎಂಬ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿಲ್ಲ. ವಿಚಾರಣೆಯ ದೃಷ್ಟಿಯಿಂದ ಗೌಪ್ಯತೆ ಕಾಪಾಡಲು ರಾಜ್ಯ ಪೊಲೀಸರ ನಿರ್ದೇಶನದಂತೆ ಅವರು ಮಾಹಿತಿ ನೀಡುತ್ತಿಲ್ಲ ಎಂಬ ವಿಚಾರ ತಿಳಿದುಬಂದಿದೆ.

ತಫ್ಸೀರ್ ಅವರಿಗೆ ಸೇರಿದ ಎರಡು ಮನೆಗಳಿಗೆ ಅಂದರೆ ಒಂದು ಹಳೆಯ ಮನೆ ಹಾಗೂ ಹೊಸ ಮನೆಗಳಿಗೆ ದಾಳಿ ನಡೆಸಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದರೆನ್ನಲಾಗಿದೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೊಲೀಸ್ ಇನ್ ಸ್ಪೆಕ್ಟರ್ ವಿವೇಕಾನಂದ, ವಿಟ್ಲ ಇನ್ ಸ್ಪೆಕ್ಟರ್ ನಾಗರಾಜ್ ಎಚ್., ನಗರ ಠಾಣಾ ಪೊಲೀಸ್ ಪಿಎಸ್ಸೈಗಳಾದ ಅವಿನಾಶ್, ಹರೀಶ್ ಸಹಿತ ಇಡೀ ಪೊಲೀಸ್ ತಂಡ ಇಲ್ಲಿ ಮೊಕ್ಕಾಂ ಇದ್ದು ಭದ್ರತೆ ಒದಗಿಸಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ PAYCM ಪೋಸ್ಟರ್ ಪ್ರಕರಣ: ಹಲವು ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News