ದಸರಾ ಹಬ್ಬಕ್ಕೆ ಆಹಾರ ಸಾಮಗ್ರಿ ವಿತರಣೆಗೆ ಮುಸ್ಲಿಂ ಲೀಗ್ ಮನವಿ

Update: 2022-09-22 12:48 GMT

ಮಂಗಳೂರು, ಸೆ. 22: ಕೇರಳದಲ್ಲಿ ಓಣಂ ಹಬ್ಬಕ್ಕೆ ಮುಖ್ಯಮಂತ್ರಿ ಪಿಣರಾಯಿಯವರು 14 ಬಗೆಯ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದಂತೆ ರಾಜ್ಯದಲ್ಲಿ ದಸರಾ ಹಬ್ಬದ ಅಂಗವಾಗಿ ಎಲ್ಲಾ ವರ್ಗದವರಿಗೂ ಕಿಟ್ ವಿತರಿಸಬೇಕು ಎಂದು ಒತ್ತಾಯಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಸಂಘಟನೆಯ ನಿಯೋಗವು ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾದ ಮನವಿಯಲ್ಲಿ, ವಾರ್ಷಿಕ ಆದಾ 2 ಲಕ್ಷದವರೆಗೆ ಆದಾಯದವರನ್ನೂ ಬಿಪಿಎಲ್‌ಗೆ ಸೇರಿಸುವಂತೆ ಒತ್ತಾಯಿಸಲಾಗಿದೆ. ಮೂತ್ರಪಿಂಡ ವೈಫಲ್ಯ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಚಿಕಿತ್ಸಾ ಸೌಲಭ್ಯವಿದ್ದರೂ ಈ ಬಗ್ಗೆ ಸೂಕ್ತ ಮಾಹಿತಿಯನ್ನು ಒದಗಿಸಬೇಕು. ರೋಗಕ್ಕೆ ಅನುಗುಣವಾಗಿ ಸಹಾಯಧನ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News