ಸೆ. 24ರಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಅಭಿನಂದನಾ ಸಮಾರಂಭ

Update: 2022-09-22 14:33 GMT

ಮಂಗಳೂರು, ಸೆ.22;  ಡಾ.ಎಂ.ಎನ್. ರಾಜೇಂದ್ರ ಕುಮಾರ್‌ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ ಬೆಂಗಳೂರು ಇದರ ಅಧ್ಯಕ್ಷರಾಗಿ, ಎರಡನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವುದು ಜಿಲ್ಲೆಗೆ ಹೆಮ್ಮೆ. ಅವರ ಈ ಸಾಧನೆಯನ್ನು ಜಿಲ್ಲೆಯ ಸಹಕಾರಿಗಳು, ಸಂಭ್ರಮಿಸುವ ಉದ್ದೇಶದಿಂದ ಸೆ. 24ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಸಮಾರಂಭವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಶಶಿ ಕುಮಾರ್ ರೈ ಬಾಲ್ಯೊಟ್ಟು ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ಇತಿಹಾಸದಲ್ಲಿ 1945ರ ನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಇದೀಗ ಎರಡನೇ ಬಾರಿಯೂ ಈ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಗೊಳ್ಳುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ.

ರಾಜ್ಯ ರಾಷ್ಟ್ರ ಮಟ್ಟದ ಸಹಕಾರಿ ನಾಯಕರಲ್ಲಿ ಒಬ್ಬರಾಗಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಸಹಕಾರ ರಂಗದಲ್ಲಿ ಸುಮಾರು 50 ವರ್ಷಗಳ ಕಾಲ ಗುರುತಿಸಿಕೊಂಡು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಆನುಪಮ ಸೇವೆಯನ್ನು ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಸುಮಾರು 28 ವರ್ಷಗಳ ಕಾಲ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆಯ ಮೂಲಕ ಇವರು  ಬ್ಯಾಂಕಿನ ಸರ್ವಾಂಗೀಣ ಪ್ರಗತಿಯ ರೂವಾರಿ ಯಾಗಿರುತ್ತಾರೆ. ಸ್ಪರ್ಧಾತ್ಮಕ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನದ ಮೂಲಕ ಅತ್ಯಾಧುನಿಕ ಸೇವೆಯನ್ನು ಗ್ರಾಹಕರಿಗೆ ನೀಡಿ ರಾಜ್ಯದಲ್ಲಿಯೇ ಮಾದರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಇವರದು ಶಶಿ ಕುಮಾರ್ ತಿಳಿಸಿದ್ದಾರೆ.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು 1999ರಿಂದ ಇದುವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರಾಗಿದ್ದು, 2005ರಿಂದ 2010ರವರೆಗೆ ಈ ಪ್ರತಿಷ್ಠಿತ ಬ್ಯಾಂಕಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಯ ಪೂರಕ ಶಕ್ತಿಯಾಗಿ ಶ್ರಮಿಸಿದ್ದರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ಮನಜಿಂಗ್‌ ಟ್ರಸ್ಟಿಯಾಗಿ ನವೋದಯ ಸ್ವ-ಸಹಾಯ ಸಂಘಗಳ ರಚನೆಯಲ್ಲಿ ಹಾಗೂ ಈ ಯೋಜನೆಯನ್ನು ವ್ಯಾಪಕವಾಗಿ ಅಂತರ್‌ ಜಿಲ್ಲಾ ಮಟ್ಟದಲ್ಲಿ  ಸಂಘಟಿಸಿದ ಶ್ರೇಯಸ್ಸು ಇವರದು.   ನವೋದಯ ವಿವಿಧೋದ್ದೇಶ ಸಹಕಾರಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿರುವ ಇವರು ರಾಷ್ಟ್ರೀಯ ಸಹಕಾರಿ ಸಂಸ್ಥೆ ಇಸ್ರೋ' ಇದರ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಖ್ಯವಾಗಿ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಹೊಸ ಆಯಾಮವನ್ನು ಈ ಕ್ಷೇತ್ರಕ್ಕೆ ನೀಡಿರುವ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸುವುದು ನಮ್ಮ ಕರ್ತವ್ಯವೂ ಕೂಡಾ ಆಗಿದೆ. ಈ ನಿಟ್ಟನಲ್ಲಿ ಸಮಸ್ತ ಸಹಕಾರಿ ಬಂಧುಗಳ ಸಮಕ್ಷಮದಲ್ಲಿ ಸೆ.24ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಭಾಭವನದಲ್ಲಿ  ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಏ ರಾಜ್ಯಸಭಾ ಸದಸ್ಯರೂ ಆಗಿರುವ ರಾಜರ್ಷಿ ಡಾ.ಡಿ. ನೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.ಸಮಾರಂಭದಲ್ಲಿ "ಜಾಗತಿಕ ಬಂಟರ ಒಕ್ಕೂಟ ಲಿ., ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿಯವರು ಆಭಿನಂದನಾ ಭಾಷಣವನ್ನು ಮಾಡಲಿರುವರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ಶುಭಾಶಂಸನೆಗೈಯಲ್ಲಿರುವರು. ಮುಖ್ಯ ಅತಿಥಿಗಳಾಗಿ ಅದಾನಿ  ಗ್ರೂಪ್‌ನ ಸೌತ್ ಇಂಡಿಯಾ  ಅಧ್ಯಕ್ಷರಾದ ಕಿಶೋರ್ ಆಳ್ವ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್ ಶೆಟ್ಟ ಬೆಳಸು ಇವರು ಭಾಗವಹಿಸಲಿರುವರು ಎಂದು ಶಶಿ ಕುಮಾರ್ ತಿಳಿಸಿದ್ದಾರೆ.

ಅದ್ಧೂರಿಯ ಸ್ವಾಗತಕ್ಕೆ ಸಿದ್ಧತೆ:- ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಕ ಮಂಗಳೂರಿಗೆ  ಸೆ.24 ರಂದು ಬೆಳಗ್ಗೆ ಗಂಟೆ 10.30ಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲ ಇವರನ್ನು ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ಮಂಗಳೂರು ವಿಮಾನ ನಿಲ್ದಾಣದಲ್ಲ. ಸ್ವಾಗತಿಸಲಾಗುವುದು ಎಂದು ಐಕಳಬಾವ ದೇವಿಪ್ರಸಾದ್ ಶೆಟ್ಟಿ  ಬೆಳಪು ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಶಶಿಕುಮಾರ್ ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಎಸ್ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿ ರಾಜು ಪೂಜಾರಿ ಹಾಗೂ ಬ್ಯಾಂಕಿನ ನಿರ್ದೇಶಕ ರಾದ ಜಯರಾಮ ರೈ,ವಿನಯ ಕುಮಾರ್ ಸೂರಿಂಜೆ, ವಾದಿರಾಜ ಶೆಟ್ಟಿ, ಜಯರಾಜ ರೈ,ಸದಾಶಿವ ಉಳ್ಳಾಲ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ  ವ್ಯವಸ್ಥಾಪಕ ನಿರ್ದೇಶಕ ಗೋಪಾಲ ಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News