ಬಂಟ್ವಾಳ ತಾಲೂಕು ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಡಾ.ಸುಧಾಕರ್

Update: 2022-09-22 16:37 GMT

ಬೆಂಗಳೂರು, ಸೆ. 22: ‘ನಾಲ್ಕು ಸಾವಿರ ಮಂದಿ ಗ್ರಾಮೀಣ ಸೇವೆ ಕಡ್ಡಾಯದಡಿಯಲ್ಲಿ ಎಂಬಿಬಿಎಸ್ ವೈದ್ಯರು ಸೇರಿದಂತೆ ತಜ್ಞರ ವೈದ್ಯರನ್ನು ಶೀಘ್ರದಲ್ಲೆ ಕೌನ್ಸಿಲಿಂಗ್ ಮೂಲಕ ನಿಯೋಜನೆ ಮಾಡುತ್ತಿದ್ದು, ಈ ವೇಳೆ ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ವೈದ್ಯರನ್ನು ಭರ್ತಿ ಮಾಡಲಾಗುವುದು' ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ರಾಜೇಶ್ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ತಾಲೂಕು ಆಸ್ಪತ್ರೆಯಲ್ಲಿ 9 ಮಂದಿ ತಜ್ಞ ವೈದ್ಯರ ಪೈಕಿ 8 ಮಂದಿ ಇದ್ದು ಅರವಳಿಕೆ ತಜ್ಞ ವೈದ್ಯರ ಹುದ್ದೆ ಖಾಲಿ ಇದೆ. ಉಳಿದಂತೆ ಇತರೆ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಿದೆ' ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News