ಶಿವಮೊಗ್ಗ | ಮುರುಘಾ ಶ್ರೀಗಳ 'ಕೊರೋನರಿ ಆಂಜಿಯೋಗ್ರಾಮ್' ಯಶಸ್ವಿ: ಡಾ.ವಿರೂಪಾಕ್ಷಪ್ಪ

Update: 2022-09-22 17:26 GMT

ಶಿವಮೊಗ್ಗ, ಸೆ.22: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶ್ರೀಗಳನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಕೋರ್ಟ್ ಸೂಚನೆಯಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೆಗ್ಗಾನ್ ವೈದ್ಯರ ತಂಡ ಅಗತ್ಯ ಪರೀಕ್ಷೆಗಳ ಜೊತೆ ಶ್ರೀಗಳ ದೈಹಿಕ ಕ್ಷಮತೆ ಗಮನಿಸಿತ್ತು ಎಂದರು.

ಗುರುವಾರ ಬೆಳಗ್ಗೆ 10:45ರಿಂದ ಆಂಜಿಯೋಗ್ರಾಂ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಹೃದಯ ತಜ್ಞರಾದ ಡಾ. ಮಹೇಶ್ ಮೂರ್ತಿ, ಡಾ. ಪರಮೇಶ್ವರ್ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. 24 ಗಂಟೆಗಳ ಕಾಲ ತೀವ್ರ ನಿಗಾದಲ್ಲಿ ಇಟ್ಟಿದ್ದೇವೆ. ಚಿಕಿತ್ಸೆ ಬಳಿಕ ಶ್ರೀಗಳ ಬಿಪಿ, ಸ್ಯಾಚುರೇಶನ್ ಎಲ್ಲವೂ ನಾರ್ಮಲ್ ಅಗಿದೆ ಎಂದು ಮಾಹಿತಿ ನೀಡಿದರು.

ಆಂಜಿಯೋಗ್ರಾಂ ಮಾಡುವ ಮುನ್ನ ಜೈಲಾಧಿಕಾರಿ ಅನುಮತಿ ತೆಗೆದುಕೊಳ್ಳಲಾಗಿತ್ತು. ಯಶಸ್ವಿಯಾದ ಬಳಿಕವೂ ಅವರಿಗೆ ಮಾಹಿತಿ ನೀಡಲಾಗಿದೆ. ಶ್ರೀಗಳ ಆರೋಗ್ಯ ಸ್ಥಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದು ಡಾ. ವಿರೂಪಾಕ್ಷಪ್ಪಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News